ದೇವಾಡಿಗ ಸಂಘ ಮುಂಬಯಿ ದಾದರ್ ನಲ್ಲಿ 73 ನೇ ಗಣರಾಜ್ಯೋತ್ಸವ ಆಚರಣೆ

ದೇವಾಡಿಗ ಸಂಘ ಮುಂಬಯಿ ದಾದರ್ ನಲ್ಲಿ 73 ನೇ ಗಣರಾಜ್ಯೋತ್ಸವ ಆಚರಣೆ

ದೇವಾಡಿಗ ಸಂಘ ಮುಂಬಯಿ, ದೇವಾಡಿಗ ಸೆಂಟರ್, ದಾದರ್ ನಲ್ಲಿ 73 ನೇ ಗಣರಾಜ್ಯೋತ್ಸವವನ್ನು ಸಂಘದ ಉಪಾಧ್ಯಕ್ಷರಾದ ಶ್ರೀ ಪ್ರವೀಣ್ ದೇವಾಡಿಗರು ನೆರವೇರಿಸಿ ಎಲ್ಲರಿಗೂ ಶುಭ ಕೋರಿದರು.

ಶ್ರೀ ವಿಶ್ವನಾಥ ಬಿ ದೇವಾಡಿಗ, ಸನ್ಮಾನ್ಯ ಪ್ರಧಾನ ಗೌರವ ಕಾರ್ಯದರ್ಶಿ, ಜೊತೆ ಕಾರ್ಯದರ್ಶಿ ಶ್ರೀಮತಿ ಮಾಲತಿ ಜೆ ಮೊಯ್ಲಿ, ಸಿಟಿ ಪ್ರಾದೇಶಿಕ ಸಮಿತಿಯ ಮಾಜಿ ಅಧ್ಯಕ್ಷರಾದ ಶ್ರೀ ಹೇಮನಾಥ್ ದೇವಾಡಿಗ ಹಾಗೂ ಮ್ಯಾನೇಜರ್ ಶಂಭು ದೇವಾಡಿಗರು ಉಪಸ್ಥಿತರಿದ್ದರು.

ಕಾರ್ಯಕ್ರಮವು ಧ್ವಜದ ನಮನದೊಂದಿಗೆ, ರಾಷ್ಟ್ರಗೀತೆ ಜನ ಗಣ ಮನ ದಿಂದ ಪ್ರಾರಂಭಗೊಂಡು ರಾಷ್ಟ್ರಗಾನ, ವಂದೇ ಮಾತರಂ ಮತ್ತು ಜಯಘೋಷಗಳಿಂದ ಕೊನೆಗೊಂಡಿತು.